ಹೊಸಕೋಟೆ: 2012- 13ನೇ ಸಾಲಿಗೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರು ಹಾಗು ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವ ಸಲುವಾಗಿ ಪಟ್ಟಿಯೊಂದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಈ ತಿಂಗಳ 23ರ ಒಳಗೆ ಲಿಖಿತವಾಗಿ ತಿಳಿಸಬೇಕೆಂದು ಸೂಚಿಸಲಾಗಿದೆ.
ಕುಂದುಕೊರತೆ ಸಭೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸರಿಂದ ಶನಿವಾರ (ಜು. 21) ಬೆಳಿಗ್ಗೆ 11ಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರೆತೆಗಳನ್ನು ತಿಳಿಸಬಹುದಾಗಿದೆ ಎಂದು ಹೊಸಕೋಟೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.