ನೆಲಮಂಗಲ: `ಶಿಕ್ಷಣ ವ್ಯಕ್ತಿ ಮತ್ತು ಶಕ್ತಿಯ ಪ್ರತೀಕ. ದೇಶದ ಸಮಸ್ಯೆಗಳಿಗೆ ಈ ಕ್ಷೇತ್ರದಿಂದ ಮಾತ್ರ ಪರಿಹಾರ ಸಾಧ್ಯ' ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.
ಪಟ್ಟಣದ ಗೋಪಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾನಿಧ್ಯ ವಹಿಸಿದ್ದ ಶಿವಗಂಗೆ ಹೊನ್ನಮ್ಮಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ, ಜಿ. ಪಂ ಅಧ್ಯಕ್ಷ ತಿರುವಂಗ ವಿ.ನಾರಾಯಣಸ್ವಾಮಿ, ಉಪನಿರ್ದೇಶಕ ಮಾದೇಗೌಡ ಅವರು ಶಿಕ್ಷಕರಾದ ವೆಂಕಟಮ್ಮ, ಈಶ್ವರ್ ಪೂಜಾರಿ, ಕೆ.ವೆಂಕಟೇಶ್, ಮಂಜುನಾಥ್, ನಾರಾಯಣ್, ಮಂಡಲೀಕಪ್ಪ.ಕೆ.ದಡ್ಡಿ, ಶ್ರೀನಿವಾಸ್ ಅವರನ್ನು ಸನ್ಮಾನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.