ಬೆಂಗಳೂರು: `ಕುರುಬ ಜನಾಂಗದವರು ಜಾತಿಯ ಕೀಳರಿಮೆಯನ್ನು ತೊಡೆದು ಸಮಾಜದ ಏಳಿಗೆಗಾಗಿ ಮುಖ್ಯವಾಹಿನಿಗೆ ಬರಬೇಕು~ ಎಂದು ಕಾಗಿನೆಲೆ ಕನಕಪೀಠದ ಈಶ್ವರಾನಂದಪುರಿ ಸ್ವಾಮೀಜಿ ಕರೆ ನೀಡಿದರು.
ನಗರದ ಹೊಸ ದೇವರಗುಡ್ಡದಲ್ಲಿ ಇತ್ತೀಚೆಗೆ ನಡೆದ ಬೀರೇದೇವರ ಉತ್ಸವ ಹಾಗೂ ಕನಕದಾಸ ಜಯಂತಿಯಲ್ಲಿ ಮಾತನಾಡಿ, `ಜನಾಂಗದ ಜನರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಮತ್ತು ಸಂಸ್ಕಾರ ನೀಡಬೇಕು. ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು~ ಎಂದರು.
ಶಾಸಕ ಎಂ.ಕೃಷ್ಣಪ್ಪ, ಸಮಾರಂಭದಲ್ಲಿ ಬಿಬಿಎಂಪಿ ಸದಸ್ಯರಾದ ಟಿ.ವಿ.ಕೃಷ್ಣಪ್ಪ, ಕೆ.ದೊಡ್ಡಣ್ಣ, ಕನಕದಾಸ ಸೇವಾ ಸಮಿತಿ ಅಧ್ಯಕ್ಷ ಆರ್.ಪಿ.ಎಸ್.ರೆಡ್ಡಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.