ADVERTISEMENT

ಶಿಕ್ಷಣ ಕ್ಷೇತ್ರದ ಖಾಸಗೀಕರಣ: ಖಾಸಗಿ ಶಾಲೆಗಳತ್ತ ಜನರ ಒಲವು ಕಾರಣ

​ಪ್ರಜಾವಾಣಿ ವಾರ್ತೆ
Published 16 ಜೂನ್ 2011, 19:30 IST
Last Updated 16 ಜೂನ್ 2011, 19:30 IST

ಪೀಣ್ಯ ದಾಸರಹಳ್ಳಿ: `ಖಾಸಗಿ ಶಾಲೆಗಳಿಗೆ ಜನ ಮಾರು ಹೋಗುತ್ತಿರುವುದರಿಂದ ಶಿಕ್ಷಣ ಕ್ಷೇತ್ರ ಹೆಚ್ಚು ಖಾಸಗೀಕರಣಗೊಳ್ಳುತ್ತಿದೆ~ ಎಂದು ಶಾಸಕ ಎಸ್.ಮುನಿರಾಜು ಹೇಳಿದರು.

ದಾಸರಹಳ್ಳಿಯ ಬಾಗಲಗುಂಟೆ ಸರ್ಕಾರಿ ಶಾಲೆಯ ಮಕ್ಕಳಿಗೆ ದಾನಿ ಶಂಕರೇಗೌಡ ಅವರು ನೀಡಿದ ನೋಟ್ ಪುಸ್ತಕಗಳನ್ನು ಇತ್ತೀಚೆಗೆ ವಿತರಿಸಿ ಅವರು ಮಾತನಾಡಿದರು.

`ಬಡವರು ಕೂಡ ಸಾಲ ಸೋಲ ಮಾಡಿ ಲಕ್ಷಗಟ್ಟಲೆ ಡೊನೇಷನ್ ನೀಡಿ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಬೇಕೆಂದು ಆಸೆ ಪಡುತ್ತಿರುವುದರಿಂದ ಗಲ್ಲಿ ಗಲ್ಲಿಗಳಲ್ಲಿ  ಖಾಸಗಿ ಶಾಲೆಗಳು ಹುಟ್ಟಿಕೊಳ್ಳುತ್ತಿವೆ~ ಎಂದು ಅವರು ತಿಳಿಸಿದರು.

ಪಾಲಿಕೆ ಸದಸ್ಯ ಚಂದ್ರಶೇಖರ್, ಜಂಟಿ ಆಯುಕ್ತ ರಾಧಾಕೃಷ್ಣ, ಉಪ ಆಯುಕ್ತ ಜನ್ನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಯರಂಗಪ್ಪ, ಬಿಜೆಪಿ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಗಂಗರಾಜು, ಬಿಬಿಎಂಪಿ ಅಧಿಕಾರಿ ಗೋಪಾಲಪ್ಪ, ಮುಖ್ಯೋಪಾಧ್ಯಾಯಿನಿ ದೇವಕಿ ಇತರರು ಉಪಸ್ಥಿತರಿದ್ದರು.

ಬಿಬಿಎಂಪಿ ವತಿಯಿಂದ ಶಾಲೆಯಲ್ಲಿ ನಿರ್ಮಿಸಿರುವ 35 ಲಕ್ಷ ರೂಪಾಯಿ ವೆಚ್ಚದ ರಂಗಮಂದಿರವನ್ನು ಉದ್ಘಾಟಿಸಲಾಯಿತು. 1250 ಮಕ್ಕಳಿಗೆ ಒಟ್ಟು 1 ಲಕ್ಷ ರೂಪಾಯಿ ಮೌಲ್ಯದ 15 ಸಾವಿರ ಪುಸ್ತಕಗಳನ್ನು ವಿತರಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.