ADVERTISEMENT

ಶಿಕ್ಷಣ: ರಾಷ್ಟ್ರೀಯ ವಿಚಾರ ಸಂಕಿರಣ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2013, 19:44 IST
Last Updated 17 ಸೆಪ್ಟೆಂಬರ್ 2013, 19:44 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಎಸ್‌ಸಿ/ಎಸ್‌ಟಿ ಶಿಕ್ಷಕರ ಸಂಘದಿಂದ ‘ಉನ್ನತ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯದ ಅನುಷ್ಠಾನ’ ವಿಷಯವಾಗಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಏರ್ಪಡಿಸಲು ನಿರ್ಧರಿಸಲಾಗಿದೆ.

ಉನ್ನತ ಶಿಕ್ಷಣದಲ್ಲಿ ದಲಿತರು ಮತ್ತು ಆದಿವಾಸಿಗಳ ಸ್ಥಿತಿ–ಗತಿ, ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಭಾರತೀಯ ಬೌದ್ಧಿಕ ಜಗತ್ತಿಗೆ ದಲಿತರ ಕೊಡುಗೆ, ದಲಿತ ಸಾಹಿತ್ಯ, ರಂಗಭೂಮಿ ಮತ್ತು ಸಾಮಾಜಿಕ ನ್ಯಾಯ, ಡಾ.ಬಿ.ಆರ್‌. ಅಂಬೇಡ್ಕರ್‌ ಸಂಶೋಧನಾ ಕೇಂದ್ರಗಳು ಮತ್ತು ಅವುಗಳ ಕೊಡುಗೆ ಸೇರಿದಂತೆ ಹಲವು ವಿಷಯಗಳ ಮೇಲೆ ಪ್ರಬಂಧ ಮಂಡಿಸಲು ಸಮ್ಮೇಳನದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಆಸಕ್ತರು ಸೆ. 25ರೊಳಗೆ ಪ್ರಬಂಧದ ಸಾರಾಂಶವನ್ನು ಕಳುಹಿಸಿಕೊಡಬೇಕು. ವಿವರಗಳಿಗೆ ಡಾ. ನಾಗೇಶ್‌ ಬೆಟ್ಟಕೋಟೆ, ಸಂಯೋಜಕರು, ರಾಷ್ಟ್ರೀಯ ವಿಚಾರ ಸಂಕಿರಣ, ಬೆಂಗಳೂರು ವಿಶ್ವವಿದ್ಯಾ ಲಯ, ಜ್ಞಾನಭಾರತಿ ಕ್ಯಾಂಪಸ್‌, ಬೆಂಗಳೂರು (080–22691708) ಈ ವಿಳಾಸ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.