ADVERTISEMENT

ಶೀಘ್ರ ನಟ ಪ್ರಶಾಂತ್ ಬಂಧನ:ಭರವಸೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2011, 19:40 IST
Last Updated 26 ಅಕ್ಟೋಬರ್ 2011, 19:40 IST

ಬೆಂಗಳೂರು:  `ಬೇರೊಬ್ಬ ಯುವತಿಯ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿರುವ ಪತಿಯ ವಿರುದ್ಧ ದೂರು ಕೊಟ್ಟಿದ್ದರೂ ಸಂಜಯನಗರ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ~ ಎಂದು ಚಿತ್ರ ನಟ ಪ್ರಶಾಂತ್ ಅವರ ಪತ್ನಿ ಶಶಿರೇಖಾ ಅವರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್‌ಕುಮಾರ್ ಅವರಿಗೆ ಬುಧವಾರ ದೂರು ನೀಡಿದ್ದಾರೆ.

ಪತಿ ಬೇರೆ ಯುವತಿಯ ಜತೆ ಸಂಜಯನಗರದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದಾಗಲೇ ಸಂಜಯನಗರ ಪೊಲೀಸರನ್ನು ಅಲ್ಲಿಗೆ ಕರೆದೊಯ್ದು ಹಿಡಿದು ಕೊಟ್ಟಿದ್ದೆ. ಪತಿಯನ್ನು ಠಾಣೆಗೆ ಕರೆದೊಯ್ದ ಪೊಲೀಸರು ಅವರನ್ನು ಬಂಧಿಸದೆ ಸ್ವಲ್ಪ ಸಮಯದಲ್ಲೇ ಠಾಣೆಯಿಂದ ಬಿಟ್ಟು ಕಳುಹಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

`ಪ್ರಶಾಂತ್ ಅವರನ್ನು ಬಿಟ್ಟು ಕಳುಹಿಸಿದ ಪೊಲೀಸರೇ ಈಗ ಪತಿಯ ಬಗ್ಗೆ ಮಾಹಿತಿ ನೀಡುವಂತೆ ನನಗೆ ಕೇಳುತ್ತಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಪತಿಯನ್ನು ಕೂಡಲೇ ಬಂಧಿಸುವಂತೆ ಸಂಜಯನಗರ ಪೊಲೀಸರಿಗೆ ಸೂಚನೆ ನೀಡಬೇಕೆಂದು ಸುನಿಲ್‌ಕುಮಾರ್ ಅವರಿಗೆ ಮನವಿ ಮಾಡಿದ್ದೇನೆ. ಪತಿಯ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸುವುದಾಗಿ ಸುನಿಲ್‌ಕುಮಾರ್ ಅವರು ಭರವಸೆ ನೀಡಿದ್ದಾರೆ~ ಎಂದು ಶಶಿರೇಖಾ `ಪ್ರಜಾವಾಣಿ~ ಗೆ  ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.