ADVERTISEMENT

ಶ್ರೀ ಶ್ರೀ ರವಿಶಂಕರ ಗುರೂಜಿಗೆ ಕೊಲೆ ಬೆದರಿಕೆ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 9 ಜೂನ್ 2017, 20:12 IST
Last Updated 9 ಜೂನ್ 2017, 20:12 IST
ಶ್ರೀ ಶ್ರೀ  ರವಿಶಂಕರ ಗುರೂಜಿಗೆ ಕೊಲೆ ಬೆದರಿಕೆ: ದೂರು ದಾಖಲು
ಶ್ರೀ ಶ್ರೀ ರವಿಶಂಕರ ಗುರೂಜಿಗೆ ಕೊಲೆ ಬೆದರಿಕೆ: ದೂರು ದಾಖಲು   

ಬೆಂಗಳೂರು: ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ ಗುರೂಜಿ ಅವರಿಗೆ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಸಂಸ್ಥೆಯ ಆಡಳಿತಾಧಿಕಾರಿ ಕಗ್ಗಲೀಪುರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ..

‘ಗುರೂಜಿ ಅವರನ್ನು ಗುಂಡಿಟ್ಟು ಹತ್ಯೆ ಮಾಡುತ್ತೇವೆ’ ಎಂದು ಮೈಸೂರಿನ ಸ್ನಾತಕೋತ್ತರ ಪದವೀಧರ ಎಚ್‌.ರವೀಂದ್ರ ಎಂಬುವರು ಫೇಸ್‌ಬುಕ್‌ ಖಾತೆ
ಯಲ್ಲಿ ಬರೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಕೊಲೆ ಬೆದರಿಕೆ ಸಂದೇಶವನ್ನು ಆರೋಪಿಯು ಖಾತೆಯಿಂದ ಅಳಿಸಿ ಹಾಕಿದ್ದಾನೆ. ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಕನಕಪುರ ರಸ್ತೆಯ ಹಾರೋಹಳ್ಳಿಯಲ್ಲಿ ನೆಲೆಸಿರುವ ಮಾಹಿತಿ ಇದ್ದು, ಆತನ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.