ADVERTISEMENT

ಸಂಕಷ್ಟದಲ್ಲಿ ವಾಹನ ಸವಾರರು

ವಿಜಯನಗರದ ಕೆಳಸೇತುವೆಯಲ್ಲಿ ಆಯಿಲ್ ಸೋರಿಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2017, 19:30 IST
Last Updated 11 ಜೂನ್ 2017, 19:30 IST
ಆಯಿಲ್ ಸೋರಿಕೆಯಾಗಿರುವ ಸ್ಥಳದಲ್ಲಿ ಮರಳು ಹಾಕಿರುವುದು
ಆಯಿಲ್ ಸೋರಿಕೆಯಾಗಿರುವ ಸ್ಥಳದಲ್ಲಿ ಮರಳು ಹಾಕಿರುವುದು   

ಬೆಂಗಳೂರು: ವಿಜಯನಗರದ ಟೋಲ್‌ಗೇಟ್ ಕೆಳಸೇತುವೆಯ ರಸ್ತೆಯುದ್ದಕ್ಕೂ ಆಯಿಲ್ ಸೋರಿಕೆಯಾಗಿದ್ದು, ಇದರಿಂದ ಬೈಕ್ ಸವಾರರು ಆಯ ತಪ್ಪಿ ಬೀಳುತ್ತಿದ್ದಾರೆ.

ಭಾನುವಾರ ಬೆಳಿಗ್ಗೆ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರರೊಬ್ಬರು ಬಿದ್ದಿದ್ದು, ತುಟಿ ಹಾಗೂ ಗದ್ದಕ್ಕೆ ಗಾಯವಾಗಿದೆ. ಈ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

‘ಆಯಿಲ್ ಸೋರಿಕೆಯಾಗಿರುವುದರಿಂದ ಸಾಕಷ್ಟು ಬೈಕ್ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಈ ಸ್ಥಳದಲ್ಲಿ ಸ್ಥಳೀಯರು ಮರಳನ್ನು ಹಾಕಿ ತಾತ್ಕಾಲಿಕವಾಗಿ ಸುರಕ್ಷಿತ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

ADVERTISEMENT

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆಯನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದಲ್ಲಿ ಮತ್ತಷ್ಟು ವಾಹನ ಸವಾರರು ತೊಂದರೆ ಅನುಭವಿಸಬೇಕಾಗುತ್ತದೆ’ ಎಂದು ವಾಹನ ಸವಾರ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.