ಜಾರಕಿಹೊಳಿಗೆ ಹೆಚ್ಚುವರಿ ಹೊಣೆ
ಬೆಂಗಳೂರು: ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ನಗರ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ) ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಉಸ್ತುವಾರಿಯನ್ನೂ ವಹಿಸಲಾಗಿದೆ.
ಇದುವರೆಗೂ ಈ ಸಂಸ್ಥೆಗಳ ಉಸ್ತುವಾರಿಯನ್ನು ಜಲಮಂಡಳಿ ಸಚಿವ ಎಸ್.ಸುರೇಶಕುಮಾರ್ ಅವರು ನೋಡಿಕೊಳ್ಳುತ್ತಿದ್ದರು.
ಡಾ. ರಂಗಸ್ವಾಮಿ ಬೆಂಗಳೂರು ವಿವಿ ಹಂಗಾಮಿ ಕುಲಪತಿ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯನ್ನಾಗಿ ಡಾ.ಎನ್.ರಂಗಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಪಾಲಿಕೆ ಅಭಿಯಾನ
ಬೆಂಗಳೂರು: ನಗರದಲ್ಲಿ ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮಹಾನಗರ ಪಾಲಿಕೆ ಅಭಿಯಾನ ಆರಂಭಿಸಿದೆ. ಸೊಳ್ಳೆ ಉತ್ಪತ್ತಿ ತಾಣಗಳಿಗೆ ಔಷಧ ಸಿಂಪಡಿಸಲಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.