ಬೆಂಗಳೂರು: `ನಮ್ಮ ದೇಶದ ಬಹುಪಾಲು ಜನರಿಗೆ ಸಂವಿಧಾನದ ಮೂಲಭೂತ ಕರ್ತವ್ಯಗಳ ಅರಿವೇ ಇಲ್ಲ~ ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ ಪಾಟೀಲ್ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು ಕಾನೂನು ಅಧ್ಯಯನ ಸಂಸ್ಥೆಯು ನಗರದ ವಿಜಯಾ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ `ಎಸ್.ಆರ್. ರಾಮಕೃಷ್ಣ ಸ್ಮಾರಕ ದತ್ತಿ ಉಪನ್ಯಾಸ~ ಕಾರ್ಯಕ್ರಮದಲ್ಲಿ `ಭಾರತದ ಸಂವಿಧಾನದಲ್ಲಿನ ಮೂಲಭೂತ ಕರ್ತವ್ಯಗಳು~ ವಿಷಯ ಕುರಿತು ಅವರು ಮಾತನಾಡಿದರು.
`ಸಂವಿಧಾನದ ಮೂಲಭೂತ ಕರ್ತವ್ಯಗಳ ಬಗ್ಗೆ ತಿಳಿದಿರುವವರು ಈ ಕರ್ತವ್ಯಗಳನ್ನು ಪಾಲಿಸುವುದಿಲ್ಲ. ದೇಶದ ಸಂವಿಧಾನದ ಪ್ರಕಾರ ನಮಗೆ ಕೆಲವು ಮೂಲಭೂತ ಕರ್ತವ್ಯಗಳಿವೆ ಎಂಬ ಬಗ್ಗೆ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುವ ಕೆಲಸವಾಗಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.