ADVERTISEMENT

ಸಂವಿಧಾನ ಇಲ್ಲದೇ ಹೋಗಿದ್ದರೆ ಹಳ್ಳಿಯಲ್ಲಿ ದನ–ಕುರಿ ಮೇಯಿಸುತ್ತಾ ಉಳಿಯುತ್ತಿದ್ದೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2018, 9:11 IST
Last Updated 14 ಏಪ್ರಿಲ್ 2018, 9:11 IST
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ)   

ಬೆಂಗಳೂರು: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಹಳ್ಳಿಯಲ್ಲಿ ದನ–ಕುರಿ ಮೇಯಿಸುತ್ತಾ ಉಳಿದುಬಿಡುತ್ತಿದ್ದೆನೋ ಏನೋ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಸಂವಿಧಾನ ರಕ್ಷಣೆಗೆ ಪಣ ತೊಡಲು ಕರೆ ನೀಡಿದ್ದಾರೆ.

‘ನನ್ನಲ್ಲಿ ಸಾಮಾಜಿಕ ನ್ಯಾಯದ ಬದ್ಧತೆ, ಹೋರಾಟದ ಕಿಚ್ಚು ಮತ್ತು ಭವಿಷ್ಯದ ಬಗ್ಗೆ ಭರವಸೆ ಹುಟ್ಟಿಸಿದ್ದು ಅಂಬೇಡ್ಕರ್. ನನ್ನ ರಾಜಕೀಯ ಬದುಕು, ಅಂಬೇಡ್ಕರ್ ಚಿಂತನೆಯ ಫಲ’ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.