ಚನ್ನಪಟ್ಟಣ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಪಟ್ಟಣದ ಎಲೆಕೇರಿ ರೈಲ್ವೆಗೇಟ್ ಅಂಡರ್ಪಾಸ್ ಕಾಮಗಾರಿ ಶಂಕುಸ್ಥಾಪನೆ ನಡೆಯಿತು.
ನೀತಿ ಸಂಹಿತೆ ಜಾರಿಯಾದ ಕಾರಣ ಶಂಕುಸ್ಥಾಪನೆ ನೆರವೇರಿಸುವುದಿಲ್ಲ ಎಂದೇ ಮಾತು ಆರಂಭಿಸಿದ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಭಾಷಣ ಮಾಡಿದರು.
ನನ್ನ 6 ತಿಂಗಳ ಅವಧಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿದ್ದೇನೆ. ನೀವು ನನ್ನ ಕೆಲಸವನ್ನು ಮೆಚ್ಚಿದ್ದರೆ ಮುಂಬರುವ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿ’ ಎಂದು ಡಿ.ಕೆ.ಸುರೇಶ್ ಮನವಿ ಮಾಡಿದರು.
ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲೇ ಸಂಸದ ಸುರೇಶ್ ಅವರು ಚುನಾವಣಾ ಭಾಷಣ ಮಾಡಿ ಮತ ಯಾಚಿಸಿದ್ದು ವಿಶೇಷವಾಗಿತ್ತು. ರಾರಾಜಿಸಿದ ಬ್ಯಾನರ್ಗಳು: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗುತ್ತದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಇತ್ತಾದರೂ, ಬೆಳಗ್ಗೆಯಿಂದಲೇ ಬೃಹತ್ ವೇದಿಕೆ ಸಿದ್ಧಪಡಿಸಿ, ಪಟ್ಟಣದ ತುಂಬೆಲ್ಲಾ ಬ್ಯಾನರ್, ಕಟೌಟ್ ಮತ್ತು ಕಾಂಗ್ರೆಸ್ ಪಕ್ಷದ ಬಾವುಟಗಳನ್ನು ಹಾರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.