ADVERTISEMENT

‘ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ’

ಅ.ರಾ.ಮಿತ್ರ
Published 24 ಜೂನ್ 2017, 19:56 IST
Last Updated 24 ಜೂನ್ 2017, 19:56 IST
ಕಾರ್ಯಕ್ರಮವನ್ನು ಭಾಸ್ಕರ್‌ ಉದ್ಘಾಟಿಸಿದರು. ಸುಶೀಲಮ್ಮ, ಪುಷ್ಪಾವತಿ ಪುರುಷೋತ್ತಮ ಇದ್ದಾರೆ
ಕಾರ್ಯಕ್ರಮವನ್ನು ಭಾಸ್ಕರ್‌ ಉದ್ಘಾಟಿಸಿದರು. ಸುಶೀಲಮ್ಮ, ಪುಷ್ಪಾವತಿ ಪುರುಷೋತ್ತಮ ಇದ್ದಾರೆ   

ದಾಬಸ್‌ಪೇಟೆ: ‘ರೈತರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಜೀವನಕ್ಕೆ ಅವಶ್ಯವಿರುವ ಹಾಗೂ ಆದಾಯ ತರುವ ಮಿಶ್ರ ಬೆಳೆಗಳನ್ನು ಬೆಳೆಯಬೇಕು’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಭಾಸ್ಕರ್ ಹೇಳಿದರು.

ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನಡೆದ ‘ಸಮಗ್ರ ಕೃಷಿ ಅಭಿಯಾನ ಯೋಜನೆಯ ಸಮಾರೋಪ ಸಮಾರಂಭ’ದಲ್ಲಿ ಅವರು ಮಾತನಾಡಿದರು.

‘ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಫಲವತ್ತಾದ ಭೂಮಿ ಕಡಿಮೆ ಆಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ ಮಾತನಾಡಿ, ‘ತಾಲ್ಲೂಕಿನಲ್ಲಿ 700 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಪ್ರತಿ ಹೋಬಳಿಯಲ್ಲಿ ರೈತ ಸಂಪರ್ಕ ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲಿ ರೈತರಿಗೆ ಬೇಕಾದ ಎಲ್ಲ ರೀತಿಯ ಬೀಜಗಳು, ಔಷಧಗಳು ಸಿಗಲಿವೆ. ಕೃಷಿ ಯಂತ್ರಧಾರೆ ಯೋಜನೆಯಡಿ ಯಂತ್ರೋಪಕರಣಗಳು ಬಾಡಿಗೆಗೆ ನೀಡಲಾಗುತ್ತದೆ ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.