ADVERTISEMENT

ಸರ್ಕಾರಿ ಆಸ್ಪತ್ರೆ ಮಂಜೂರು: ಭರವಸೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2012, 19:15 IST
Last Updated 4 ಆಗಸ್ಟ್ 2012, 19:15 IST

ಯಲಹಂಕ: ನ್ಯಾಯಾಂಗ ಬಡಾವಣೆಗೆ ಸರ್ಕಾರಿ ಆಸ್ಪತ್ರೆ ಮಂಜೂರು ಮಾಡಿಸುವ ಸಂಬಂಧ ಸರ್ಕಾರವನ್ನು ಕೋರಲಾಗುವುದು ಎಂದು ವಿಧಾನ ಪರಿಷತ್‌ನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಭರವಸೆ ನೀಡಿದರು.

ನ್ಯಾಯಾಂಗ ಬಡಾವಣೆಯ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕರ್ನಾಟಕ ರಾಜ್ಯ ನ್ಯಾಯಾಂಗ ನೌಕರರ ಗೃಹ ನಿರ್ಮಾಣ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಂಘದ ಪ್ರಧಾನ ಪೋಷಕ ಎಚ್.ಎಂ.ಭಾರತೇಶ ಮಾತನಾಡಿ, ಮೂರ್ತಿ ಅವರ ಸೇವಾ ಕಾರ್ಯ ಶ್ಲಾಘಿಸಿದರು. ತಮ್ಮ ಜೀವನದುದ್ದಕ್ಕೂ ಹಲವಾರು ರಂಗಗಳಲ್ಲಿ ಸಾಮಾಜಿಕ ಸೇವಾ ಕಾರ್ಯ ಕೈಗೊಳ್ಳುವ ಮೂಲಕ  ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.