ADVERTISEMENT

ಸರ್ಕಾರಿ ನೌಕರರಿಗೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2013, 19:43 IST
Last Updated 25 ಸೆಪ್ಟೆಂಬರ್ 2013, 19:43 IST

ಬೆಂಗಳೂರು:  ‘ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘವು ಭ್ರಷ್ಟಾಚಾರ, ಸಕಾಲ, ಮಾಹಿತಿ ಹಕ್ಕು ಹಾಗೂ ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಕಾರ್ಯಾಗಾರವನ್ನು ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಸೆ.28 ರಂದು ಬೆಳಿಗ್ಗೆ 10.30 ಕ್ಕೆ ಏರ್ಪಡಿಸಿದೆ’ ಎಂದು ಸಂಘದ ಅಧ್ಯಕ್ಷ ಎಲ್‌.ಬೈರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಂ.ಪಟೇಲ್‌ ಪಾಂಡು ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಾಗಾರವನ್ನು ಲೋಕಾಯುಕ್ತ ವೈ.ಭಾಸ್ಕರರಾವ್‌ ಅವರು ಉದ್ಘಾಟಿಸಲಿದ್ದು, ಮಾಹಿತಿ ಹಕ್ಕು ಆಯೋಗದ ಆಯುಕ್ತ ಡಿ.ತಂಗರಾಜು, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಶಂಕರಲಿಂಗೇಗೌಡ ಮತ್ತಿತರರು ಪಾಲೊ್ಗಳ್ಳಲಿದ್ದಾರೆ  ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.