ಪೀಣ್ಯ ದಾಸರಹಳ್ಳಿ: `ದಾಸರಹಳ್ಳಿಯ ಕ್ಷೇತ್ರದಲ್ಲಿ ಪ್ರತಿ ಮನೆಗೆ ಒಂದರಂತೆ ಸಸಿಗಳನ್ನು ನೀಡಲಾಗುವುದು ಅದನ್ನು ನೆಟ್ಟು ಬೆಳೆಸುವ ಮೂಲಕ ಎಲ್ಲರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು~ ಎಂದು ಶಾಸಕ ಎಸ್.ಮುನಿರಾಜು ಹೇಳಿದರು. ಅವರು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಉದ್ಯಾನದಲ್ಲಿ ಸಸಿ ನೆಟ್ಟು ಮಾತನಾಡಿದರು. ಪಾಲಿಕೆ ಸದಸ್ಯರಾದ ಚಂದ್ರಶೇಖರ್, ಶಶಿ ಶಿವಕುಮಾರ್, ಪುಟ್ಟಮ್ಮ ತಮ್ಮಣ್ಣ, ಜಂಟಿ ಆಯುಕ್ತ ರಾಧಕೃಷ್ಣ, ಉಪಆಯುಕ್ತ ಜನ್ನಪ್ಪ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.