ಬೆಂಗಳೂರು: ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ನ ಆಡಳಿತ ಮಂಡಳಿಗೆ ಹೊಸದಾಗಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಜಂಟಿ ನಿಬಂಧಕರ ನ್ಯಾಯಾಲಯವು ಬುಧವಾರ ಸೂಚನೆ ನೀಡಿದೆ.
2010ರ ಮಾರ್ಚ್ 14ರಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದು ಆರೋಪಿಸಿ ಬ್ಯಾಂಕ್ ಸದಸ್ಯ ಎಂ. ವೆಂಕಟೇಶ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳ ಪ್ರಕಾರ ನಾಮಪತ್ರ ಸಲ್ಲಿಕೆಗೆ ಏಳು ದಿನಗಳ ಗಡುವು ನೀಡಬೇಕು. ಆದರೆ ಚುನಾವಣಾಧಿಕಾರಿಗಳು ನಾಮಪತ್ರ ಸಲ್ಲಿಕೆ ಗಡುವನ್ನು ಕಡಿತಗೊಳಿಸಿದ್ದರು ಎಂಬುದನ್ನು ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಜಂಟಿ ನಿಬಂಧಕರ ನ್ಯಾಯಾಲಯವು, ಆಡಳಿತ ಮಂಡಳಿಗೆ ಹೊಸದಾಗಿ ಚುನಾವಣೆ ಪ್ರಕ್ರಿಯೆ ನಡೆಸಲು ಕೂಡಲೇ ಚುನಾವಣಾ ನಿರ್ವಚನಾಧಿಕಾರಿಯನ್ನು ನೇಮಿಸಿ ಕಾನೂನುಬದ್ಧವಾಗಿ ಚುನಾವಣೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.