ಬೆಂಗಳೂರು: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಈ ವರ್ಷದಲ್ಲೇ ಬಿಡುಗಡೆ ಮಾಡುತ್ತೇವೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮೀಕ್ಷಾ ವರದಿ ಸಿದ್ಧವಾಗಿದೆ. ಆದರೆ, ಅಲ್ಪಸ್ವಲ್ಪ ಮಾಹಿತಿಯನ್ನು ಸೇರಿಸಬೇಕಿದೆ. ಅಧಿಕಾರಿಗಳಿಂದ ಆ ಮಾಹಿತಿಯನ್ನು ತರಿಸಿಕೊಂಡು ವರದಿಗೆ ಸೇರಿಸಲಾಗುತ್ತದೆ. ಅದನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ವಿಧಾನ ಮಂಡಲದ ಮುಂದಿಡಲಾಗುತ್ತದೆ. ಬಳಿಕ ವರದಿಯನ್ನು ಬಿಡುಗಡೆ ಮಾಡುತ್ತೇವೆ’ ಎಂದರು.
‘ಅನ್ಯಾಯಕ್ಕೊಳಗಾಗಿರುವ ಸಮುದಾಯಗಳಿಗೆ ಸವಲತ್ತು ಕೊಡಲು ಈ ಸಮೀಕ್ಷೆಯನ್ನು ನಡೆಸಿದ್ದೇವೆ. ಇದಕ್ಕೂ ಚುನಾವಣೆಗೂ ಸಂಬಂಧವಿಲ್ಲ’ ಎಂದು ಹೇಳಿದರು.
‘ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಬೇಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿಲ್ಲ. ಈ ವಿಷಯದಲ್ಲಿ ಯಾರೂ ಒತ್ತಡ ಹೇರಿಲ್ಲ’ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.