ADVERTISEMENT

ಸಾಲು ಮರದ ತಿಮ್ಮಕ್ಕ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2012, 19:30 IST
Last Updated 6 ಆಗಸ್ಟ್ 2012, 19:30 IST

ಬೆಂಗಳೂರು: `ಅನಾರೋಗ್ಯಕ್ಕೆ ತುತ್ತಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ ಅವರು ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ~ ಎಂದು ಆಸ್ಪತ್ರೆಯ ವೈದ್ಯ ಡಾ.ಎಚ್.ಕೆ.ಗೋವಿಂದಯ್ಯ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪರಿಸರ ಸಚಿವ ಸೊಗಡು ಶಿವಣ್ಣ ಅವರು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ತಿಮ್ಮಕ್ಕನವರ ಯೋಗ ಕ್ಷೇಮ ವಿಚಾರಿಸಿದರು.ತಿಮ್ಮಕ್ಕ ದತ್ತುಪುತ್ರ `ವನಸಿರಿ~ ಉಮೇಶ್ ಮಾತನಾಡಿ, `ಯಡಿಯೂರಪ್ಪ ಅವರು ವೈದ್ಯಕೀಯ ವೆಚ್ಚಕ್ಕಾಗಿ 10 ಸಾವಿರ ರೂಪಾಯಿ ನೀಡಿದ್ದಾರೆ~ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.