ADVERTISEMENT

ಸಾಹಿತ್ಯ ಅಕಾಡೆಮಿಗೆ ಸರ್ಕಾರದ ಅನುದಾನ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 19:30 IST
Last Updated 13 ಜನವರಿ 2012, 19:30 IST

ಬೆಂಗಳೂರು: ಕವಿರತ್ನತ್ರಯರಲ್ಲಿ ಒಬ್ಬರಾದ ರನ್ನ ರಚಿಸಿರುವ ಸಾಹಸಭೀಮ ವಿಜಯ ಮತ್ತು ಅಜಿತನಾಥ ಪುರಾಣ ಕೃತಿಗಳ ಮುದ್ರಣಕ್ಕಾಗಿ ರಾಜ್ಯ ಸರ್ಕಾರ ಹತ್ತು ಲಕ್ಷ ರೂ ಅನುದಾನವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಬಿಡುಗಡೆ ಮಾಡಿದೆ.

ತಲಾ ಸಾವಿರ ಪ್ರತಿಗಳನ್ನು ಮುದ್ರಿಸಲಾಗುತ್ತದೆ. ಜನಸಾಮಾನ್ಯರು, ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ದೊರಕುವಂತೆ ಬೆಲೆ ನಿಗದಿ ಮಾಡಬೇಕು.

ಸರ್ಕಾರ ನೀಡಿರುವ ಅನುದಾನವನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರ ಬಳಸಬೇಕು ಎಂಬುದು ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ.

ಮಂಜೂರಾತಿ: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಐಎಎಸ್, ಐಪಿಎಸ್, ಐಎಫ್‌ಎಸ್ ಮತ್ತಿತರ ಸೇವೆಗಳಿಗೆ ಆಯ್ಕೆಯಾಗುವ ಕರ್ನಾಟಕದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವ ಸಂಬಂಧ ಸರ್ಕಾರ ಇದೇ 9ರಂದು ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.