ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕಪ್ಪುಬಾವುಟ ಪ್ರದರ್ಶನ ಮಾಡಲು ಲೋಕಸತ್ತಾ ಪಕ್ಷ ತೀರ್ಮಾನಿಸಿದೆ.
ಈ ವಿಷಯದಲ್ಲಿ ಮಾಡುತ್ತಿರುವ ಹೋರಾಟಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಭ್ರಷ್ಟರನ್ನು ರಕ್ಷಿಸುವುದು ಕೂಡ ಭ್ರಷ್ಟಾಚಾರ ಆಗುತ್ತದೆ ಎಂದು ಲೋಕಸತ್ತಾ ಪಕ್ಷದ ಪದಾಧಿಕಾರಿಗಳು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಇದೇ 13ರಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಕಾರ್ಯಕಾರಿಣಿ ಸದಸ್ಯೆ ಶಾಂತಲಾ ದಾಮ್ಲೆ, ಕಾರ್ಯದರ್ಶಿ ಸಿ.ಎನ್.ದೀಪಕ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.