
ಪ್ರಜಾವಾಣಿ ವಾರ್ತೆಬೆಂಗಳೂರು: ಪ್ರಧಾನ ಮಂತ್ರಿಗಳ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಇತರರಿಗೆ ದಂಡ ವಿಧಿಸಿ ಕೇಂದ್ರ ಆಡಳಿತ ನ್ಯಾಯಮಂಡಳಿಯ (ಸಿಎಟಿ) ರಾಜ್ಯ ಘಟಕ ಕಳೆದ ನ.9ರಂದು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ತಮ್ಮನ್ನು ಭದ್ರತಾ ಅಧಿಕಾರಿಯಾಗಿ ನೇಮಕ ಮಾಡದ ಕ್ರಮ ಪ್ರಶ್ನಿಸಿ ಡಾ.ಆರ್.ಪಿ.ಶರ್ಮ ಅವರು ಸಿಎಟಿ ಮೊರೆ ಹೋಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.