
ಪ್ರಜಾವಾಣಿ ವಾರ್ತೆಬೆಂಗಳೂರು: ‘ದೇಶದ ಈ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಯಲ್ಲಿ 55 ವರ್ಷಗಳ ಹಿಂದೆ ನಾನು ಪ್ರಾಧ್ಯಾಪಕನಾಗಿ ನೇಮಕಗೊಂಡಾಗ ನನಗೆ ಸಿಗುತ್ತಿದ್ದ ಸಂಬಳ ರೂ 4,500 ಆಗಿತ್ತು. ಆಗಿನ ನೆನಪುಗಳು ಇನ್ನೂ ಹಸಿರಾಗಿವೆ’ ಎಂದು ಹಿರಿಯ ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್ ಮೆಲುಕು ಹಾಕಿದರು.
ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಹಳೆಯ ವಿದ್ಯಾರ್ಥಿಗಳ ಸಂಘ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಮರಗಳ ಮೇಳೆಯಲ್ಲಿ ಓಡಾಡಿದ ಆ ದಿನಗಳು, ಕ್ಲಾಸ್ರೂಮ್ಗಳಲ್ಲಿ ಮಾಡಿದ ಪಾಠಗಳನ್ನು ನೆನಪಿಸಿಕೊಂಡರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಾಜಿ ನಿರ್ದೇಶಕ ಪ್ರೊ. ಆರ್ಕಾಟ್ ರಾಮಚಂದ್ರನ್ ಮಾತನಾಡಿ, ‘ರಾಜಕಾರಣಿಗಳು ಮೂರ್ಖರು ಎಂಬ ಪ್ರೊ. ರಾವ್ ಅವರ ಹೇಳಿಕೆಯಲ್ಲಿ ಯಾವುದೇ ಉತ್ಪ್ರೇಕ್ಷೆ ಇರಲಿಲ್ಲ’ ಎಂದು ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.