ADVERTISEMENT

ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಮೇ 2012, 19:30 IST
Last Updated 31 ಮೇ 2012, 19:30 IST

ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆಯನ್ನು ವಿರೋಧಿಸಿ ಸಿಪಿಐ (ಎಂ) ಕಾರ್ಯಕರ್ತರು ನಗರದ ವಿವಿಧ ಕಡೆಗಳಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಕೆ.ಆರ್.ಪುರ, ಬನಶಂಕರಿ, ಬೊಮ್ಮಸಂದ್ರ, ಪೀಣ್ಯ ಮತ್ತು ಯಲಹಂಕದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು  ಸರ್ಕಾರದ ಪ್ರತಿಕೃತಿಗಳನ್ನು ದಹಿಸಿದರು.ಪುರಭವನದ ಎದುರು ಮಾತನಾಡಿದ ಸಿಪಿಐ (ಎಂ) ರಾಜ್ಯ ಸಮಿತಿ ಸದಸ್ಯ ಉಮೇಶ್, `

ತೈಲ ಕಂಪೆನಿಗಳು ಲಾಭದಲ್ಲಿದ್ದರೂ, ನಷ್ಟದ ಲೆಕ್ಕ ತೋರಿಸಿ ಸರ್ಕಾರ ಜನತೆಗೆ ಅನ್ಯಾಯ ಮಾಡಲು ಮುಂದಾಗಿದೆ~ ಎಂದು ಆರೋಪಿಸಿದರು.ರಾಜ್ಯ ಕೇಂದ್ರದ ಮೇಲೆ ಆರೋಪ ಹೊರಿಸುತ್ತಾ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.