ಬೆಂಗಳೂರು: ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) (ಎಮ್ಎಲ್)ದ ಪ್ರಣಾಳಿಕೆಯನ್ನು ರಾಜ್ಯ ಘಟಕದ ಅಧ್ಯಕ್ಷ ಕ್ಲಿಪ್ಟನ್ ಡಿ ರೊಜಾರಿಯೋ ಬಿಡುಗಡೆ ಮಾಡಿದರು.
ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು
* ಕೆಲಸ ಮಾಡದ ಪ್ರತಿನಿಧಿಗಳ ಸದಸ್ಯತ್ವವನ್ನು ರದ್ದು ಮಾಡುವ ಹಕ್ಕನ್ನು ಮತದಾರರಿಗೆ ನೀಡುವಂತೆ ಹೋರಾಟ
* ಕೆ.ಜಿ ಇಂದ ಪಿ.ಜಿ ವರೆಗೆ ಉಚಿತ ಶಿಕ್ಷಣ
* ಎಲ್ಲರಿಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಿಗುವಂತೆ ನೋಡಿಕೊಳ್ಳುವುದು
* ಒತ್ತುವರಿಯಾದ ಸರ್ಕಾರಿ ಜಮೀನನ್ನು ಸಾರ್ವಜನಿಕರಿಗೆ ಹಂಚುವುದು
* ಸ್ಲಂ ನಿವಾಸಿಗಳಿಗೆ ತಾವು ವಾಸಿಸುತ್ತಿರುವ ಮನೆಗೆ ಹಕ್ಕುಪತ್ರ ನೀಡುವುದು
* ಗಗನಕ್ಕೇರಿದ ಮನೆ ಬಾಡಿಗೆಯನ್ನು ನಿಯಂತ್ರಣಕ್ಕೆ ತರುವುದು
* ಅಂತರ್ಜಾತಿಯ ವಿವಾಹವನ್ನು ಪ್ರೋತ್ಸಾಹಿಸಲಾಗುವುದು. ಇದಕ್ಕೆ ಸಂಬಂಧಿಸಿ ನಡೆಯುವ ಹತ್ಯೆಗಳನ್ನು ನಿಲ್ಲಿಸಲಾಗುವುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.