ಬೆಂಗಳೂರು: ‘ರಾಜ್ಯದಲ್ಲಿ ವೀರಶೈವ ಲಿಂಗಾಯತರಿಗೆ ರಾಜಕೀಯ ಸೇರಿದಂತೆ ಮತ್ತಿತರರ ಕ್ಷೇತ್ರಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡದೆ ವಂಚಿಸಲಾಗುತ್ತಿದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಪಿ.ಮಹದೇವಪ್ಪ ದೂರಿದರು.
ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ 3 ಕೋಟಿಗೂ ಹೆಚ್ಚು ಸಮುದಾಯದ ಜನರಿದ್ದಾರೆ. ಆದರೆ, ರಾಜಕೀಯವಾಗಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ಎಐಸಿಸಿಯಲ್ಲಿಯೂ ಸಮುದಾಯದ ಮುಖಂಡರನ್ನು ಕಡೆಗಣಿಸಲಾಗುತ್ತಿದೆ. ಸಮುದಾಯದ ಅಭ್ಯರ್ಥಿಗಳನ್ನು ಹೀಗೆ ಕಡೆಗಣಿಸಿದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.ಕೊಡಗು ಲೋಕಸಭಾ ಕ್ಷೇತ್ರದಿಂದ ವೀರಶೈವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.