ಬೆಂಗಳೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಶವವನ್ನು ಸೂಟ್ಕೇಸ್ಗೆ ತುಂಬಿ ಎಸೆದು ಪರಾರಿಯಾಗಿರುವ ಘಟನೆ ಕೆಂಪೇಗೌಡನಗರದ ಅಪ್ಪೂರಾವ್ ರಸ್ತೆಯಲ್ಲಿ ಬುಧವಾರ ನಡೆದಿದೆ.
ಕೊಲೆಯಾದ ಮಹಿಳೆ ಯಾರೆಂದು ಗೊತ್ತಾಗಿಲ್ಲ. ಆಕೆಯ ವಯಸ್ಸು ಸುಮಾರು ಇಪ್ಪತ್ತೈದು ವರ್ಷ. ಬೇರೆ ಸ್ಥಳದಲ್ಲಿ ಕೊಲೆ ಮಾಡಿ ಶವವನ್ನು ಸೂಟ್ಕೇಸ್ನಲ್ಲಿ ತುಂಬಿ ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.