ಬೆಂಗಳೂರು: ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಸೆಕ್ಯುರಿಟಿ ಗಾರ್ಡ್ಗಳು ಹೊಯ್ಸಳ ಸೇನೆ ಸದಸ್ಯರ ಜತೆ ಸೇರಿ `ಮಾರ್ಕ್ ಸೆಕ್ಯುರಿಟಿ ಸರ್ವೀಸಸ್~ ಕಚೇರಿ ಮೇಲೆ ದಾಳಿ ಮಾಡಿದ ಘಟನೆ ವಿಜಯನಗರದಲ್ಲಿ ಶುಕ್ರವಾರ ನಡೆದಿದೆ.
ಕಚೇರಿಯೊಳಗೆ ನುಗ್ಗಿದ 50ಕ್ಕೂ ಹೆಚ್ಚು ಮಂದಿ ಗದ್ದಲ ಮಾಡಿ ಕಚೇರಿಯ ಸಿಬ್ಬಂದಿ ರಾಜೇಶ್ ಎಂಬುವರ ಮೇಲೆ ಹಲ್ಲೆ ನಡೆಸಿದರು. ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.