ಬೆಂಗಳೂರು: ಕೆ.ಆರ್.ಪುರ ಸಮೀಪದ ಟಿ.ಸಿ.ಪಾಳ್ಯದಲ್ಲಿ ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಾನ್ಸ್ಟೇಬಲ್ ಹೆಸರು ವಸಂತಕುಮಾರ್ (34) ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, `ಪ್ರಜಾವಾಣಿ~ಯ ಭಾನುವಾರದ (ಏ.15) ಸಂಚಿಕೆಯಲ್ಲಿ ವಸಂತಕುಮಾರ್ ಅವರ ಹೆಸರಿನ ಬದಲಿಗೆ ವಾಸುದೇವ್ ಎಂದು ತಪ್ಪಾಗಿ ವರದಿಯಾಗಿತ್ತು.
ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ವಸಂತಕುಮಾರ್ ಅವರು ದೀರ್ಘ ಕಾಲದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಅವರನ್ನು 2010ರಲ್ಲಿ ಸೇವೆಯಿಂದ ವಜಾಗೊಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.