ADVERTISEMENT

ಸ್ವಾಭಿಮಾನಿ ಸಂದೇಶ ಅಭಿಯಾನ ನಾಳೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2012, 19:30 IST
Last Updated 11 ಅಕ್ಟೋಬರ್ 2012, 19:30 IST

ಬೆಂಗಳೂರು: ಬಿಎಸ್‌ಆರ್ ಕಾಂಗ್ರೆಸ್ಸಿನ ರಾಜ್ಯ ಯುವ ಘಟಕ ಹಮ್ಮಿಕೊಂಡಿರುವ `ಸ್ವಾಭಿಮಾನಿ ಯುವ ಸಂದೇಶ ಅಭಿಯಾನ~ಕ್ಕೆ ಇಲ್ಲಿನ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಇದೇ 13ರಂದು ಪಕ್ಷದ ಅಧ್ಯಕ್ಷ ಬಿ.ಶ್ರೀರಾಮುಲು ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಯುವ ಘಟಕದ ಅಧ್ಯಕ್ಷ ಕೆ.ಆರ್.ವೆಂಕಟೇಶ್ ಗೌಡ ಹೇಳಿದರು.

ಅಭಿಯಾನದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವೈಫಲ್ಯಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಲಾಗು ವುದು ಎಂದು ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಅವರು ಹೇಳಿದರು.

ಅಭಿಯಾನವು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳು, ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ  ನಡೆಯ ಲಿದೆ. ಡಿಸೆಂಬರ್ 6ಕ್ಕೆ ಹುಬ್ಬಳ್ಳಿಯಲ್ಲಿ ಸಮಾರೋಪಗೊಳ್ಳಲಿದೆ ಎಂದು ಮಾಹಿತಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.