ADVERTISEMENT

ಹಲ್ಲೆ: ಸದಸ್ಯನನ್ನು ಬಂಧಿಸುವಂತೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಜನವರಿ 2012, 19:30 IST
Last Updated 27 ಜನವರಿ 2012, 19:30 IST

ತಲಘಟ್ಟಪುರ: `ಕುಂಬಳಗೋಡು ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿದ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಅವರನ್ನು ಬಂಧಿಸಬೇಕು. ಅವರ ಸದಸ್ಯತ್ವವನ್ನು ರದ್ದು ಮಾಡಬೇಕು~ ಎಂದು ಒತ್ತಾಯಿಸಿ ಪಂಚಾಯಿತಿ ನೌಕರರು ಬನಶಂಕರಿ ಬಳಿ ಇರುವ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

`ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ ನೌಕರರ ಸಂಘದ ಅಧ್ಯಕ್ಷ ಪರಶಿವಮೂರ್ತಿ ಮತ್ತು ಕಾರ್ಯದರ್ಶಿ ರಮೇಶ್ ಮಾತನಾಡಿ, `ಹಲವು ಬಾರಿ ನೌಕರರ ಮೇಲೆ ದೌರ್ಜನ್ಯ ನಡೆಸಿರುವ ಸದಸ್ಯನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ನೌಕರರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು~ ಎಂದು ಆಗ್ರಹಿಸಿದರು.

ಸಂಘದ ಬೆಂಗಳೂರು ಜಿಲ್ಲೆ ಅಧ್ಯಕ್ಷ ಚೆಲುವರಂಗೇಗೌಡ, ಕಾರ್ಯದರ್ಶಿ ಶ್ರೀಧರ್ ಮಾತನಾಡಿದರು.
ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೂರ್ಯನಾರಾಯಣರಾವ್, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.