
ಪ್ರಜಾವಾಣಿ ವಾರ್ತೆಹೊಸಕೋಟೆ: ಕೊಯಮತ್ತೂರಿನಲ್ಲಿ ಇತ್ತೀಚೆಗೆ ನಡೆದ 35ನೇ ರಾಷ್ಟ್ರಮಟ್ಟದ ಹಿರಿಯರ ಅಥ್ಲೆಟಿಕ್ಸ್ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಪಟ್ಟಣದ ಹಿರಿಯ ಕ್ರೀಡಾಪಟು ಕೆ. ಮಂಜುನಾಥ 60 ವರ್ಷಕ್ಕಿಂತ ಅಧಿಕ ವಯೋಮಾನದವರ ವಿಭಾಗದಲ್ಲಿ 5 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಪಡೆದಿದ್ದಾರೆ.
ವಿವಿಧ ವಯೋಮಾನದವರ ಸ್ಪರ್ಧೆಗಳಲ್ಲಿ ಪಟ್ಟಣದ ಎಚ್.ಆರ್. ಶಂಕರ್ ಷಾಟ್ಪಟ್ನಲ್ಲಿ, ಪೂಜಮ್ಮ 5 ಕಿ.ಮೀ. ನಡಿಗೆಯಲ್ಲಿ ಹಾಗೂ ಸುಶೀಲಾಮೂರ್ತಿ ಡಿಸ್ಕಸ್ ಥ್ರೋದಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ವಿಜೇತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿರಿಯ ಕ್ರೀಡಾಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.