ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಹುಣಸಮಾರನಹಳ್ಳಿ ಗ್ರಾಮ ಪಂಚಾಯಿತಿಯ 2017–18ನೇ ಸಾಲಿನ ಗ್ರಾಮಸಭೆ ನಡೆಯಿತು.
ಸಭೆ ಬಳಿಕ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ, ಟೈಲರಿಂಗ್ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ಮತ್ತು ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು.
ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ‘ಹುಣಸಮಾರನಹಳ್ಳಿ ಭಾಗದಲ್ಲಿ ತಲೆಯೆತ್ತಿರುವ ನೂತನ ಬಡಾವಣೆಗಳಲ್ಲಿ ಸಣ್ಣ ಜಾಗದಲ್ಲಿ 3–4 ಅಂತಸ್ತಿನ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ. ರಸ್ತೆ, ಪಾದಚಾರಿ ಮಾರ್ಗಕ್ಕೆ ಸರಿಯಾದ ಜಾಗ ಬಿಟ್ಟಿಲ್ಲ. ವಾಹನ ನಿಲುಗಡೆಗೂ ಅವಕಾಶವಿಲ್ಲ. ಹೀಗಾದರೆ ಮೂಲಸೌಲಭ್ಯಗಳನ್ನು ಒದಗಿಸುವುದು ಹೇಗೆ? ಈ ಬಗ್ಗೆ ಸಾರ್ವಜನಿಕರು ಆಲೋಚನೆ ಮಾಡಬೇಕು’ ಎಂದು ಸಲಹೆ ನೀಡಿದರು.
‘ಹುಣಸಮಾರನಹಳ್ಳಿಯಿಂದ ಕೋಡಗಲಹಟ್ಟಿ ಮಾರ್ಗವಾಗಿ ಹೊಸಹಳ್ಳಿಯವರೆಗೆ ರಸ್ತೆಯ ಡಾಂಬರೀಕರಣಕ್ಕೆ ₹1.6 ಕೋಟಿ ಅನುದಾನ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.