ಬೆಂಗಳೂರು: ‘ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಹೈದರಾಬಾದ್ ಕರ್ನಾಟಕ ಭಾಗದ ಹಿರಿಯ ಶಾಸಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಹೈದರಾಬಾದ್ ಕರ್ನಾಟಕ ನಾಗರಿಕ ಹಿತರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಉಮೇಶ್ ಎಸ್.ಕುಲಕರ್ಣಿ ಒತ್ತಾಯಿಸಿದ್ದಾರೆ.
‘ಈಗಾಗಲೇ ಹೈದರಾಬಾದ್ ಕರ್ನಾಟಕ ಭಾಗವು ಅನೇಕ ಸೌಲಭ್ಯಗಳಿಂದ ವಂಚಿತವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಔದ್ಯೋಗಿಕ ದೃಷ್ಟಿಯಿಂದ ಹಿಂದುಳಿದಿದೆ. ಹೀಗಾಗಿ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನದ ವಿಧಿ 371 (ಜೆ) ಅನುಷ್ಠಾನ ಸಮಿತಿಯ ಅಧ್ಯಕ್ಷರನ್ನಾಗಿ ಹೈದರಾಬಾದ್ ಕರ್ನಾಟಕ ಭಾಗದ ಹಿರಿಯ ಶಾಸಕರನ್ನೇ ನೇಮಕ ಮಾಡಬೇಕು’ ಎಂದೂ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.