ADVERTISEMENT

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2012, 19:30 IST
Last Updated 13 ಅಕ್ಟೋಬರ್ 2012, 19:30 IST

ಕೃಷ್ಣರಾಜಪುರ: `ದೈಹಿಕ ಮತ್ತು ಮಾನಸಿಕ ದೃಢತೆ ಕಾಪಾಡಲು ಕ್ರೀಡೆ ಸಹಾಯಕಾರಿಯಾಗಿದ್ದು, ಯುವಕರು ಕ್ರೀಡಾಚಟುವಟಿಕೆಯಲ್ಲಿ ಹೆಚ್ಚಾಗಿ ಭಾಗವಹಿಸಬೇಕು~ ಎಂದು ಮಾಜಿ ಸಚಿವ ಎ.ಕೃಷ್ಣಪ್ಪ ಸಲಹೆ ನೀಡಿದರು.
ವಿಜನಾಪುರ ಆಟದ ಮೈದಾನದಲ್ಲಿ ಈಚೆಗೆ ಏರ್ಪಡಿಸಿದ್ದ ಹೊನಲು-ಬೆಳಕು ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನಪರಿಷತ್ ಸದಸ್ಯ ಭೈರತಿ ಎಸ್.ಸುರೇಶ್ ಕ್ರೀಡಾಪಟುಗಳಿಗೆ ಟೀ ಶರ್ಟ್ ನೀಡುವುದರ ಮೂಲಕ ಶುಭ ಕೋರಿದರು. ಬಿಬಿಎಂಪಿ ಸದಸ್ಯೆ ಕೆ.ಪೂರ್ಣಿಮಾ, ಕಾಂಗ್ರೆಸ್‌ನ ಹೊರಮಾವು ವಾರ್ಡ್ ಘಟಕದ ಸಮಿತಿಯ ಅಧ್ಯಕ್ಷ ಆರ್.ಪ್ರಕಾಶ್, ಯುವ ಕಾಂಗ್ರೆಸ್ ಅಧ್ಯಕ್ಷ ರವಿಕುಮಾರ್, ನಗರಸಭೆ ಮಾಜಿ ಸದಸ್ಯ ಡಿ.ಕೆ.ಮೋಹನ್ ಬಾಬು ಉಪಸ್ಥಿತರಿದ್ದರು. 24 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದುವು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.