ADVERTISEMENT

‘ಆತ್ಮವಿಶ್ವಾಸದಿಂದ ಮುನ್ನಡೆಯಿರಿ’

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 20:12 IST
Last Updated 8 ಮಾರ್ಚ್ 2014, 20:12 IST

ಬೆಂಗಳೂರು: ‘ಮಹಿಳೆಯರು ಇಂದು ಆತ್ಮವಿಶ್ವಾಸ ಮತ್ತು ಧನಾತ್ಮಕ ಯೋಚ­ನೆ­ಯಿಂದ ಸಾಧನೆಯತ್ತ ಮುನ್ನಡೆ­ಯ­ಬೇಕು’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಪ್ರಾದೇ­ಶಿಕ ನಿರ್ದೇಶಕಿ ಉಮಾ ಶಂಕರ್‌ ಹೇಳಿದರು.

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು  ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಮಹಿಳಾ ಲೆಕ್ಕ ಪರಿಶೋಧಕರ ಸಮಾವೇಶ’ದಲ್ಲಿ ಭಾಗ­ವಹಿಸಿ ಅವರು ಮಾತನಾಡಿದರು.

‘ಮಹಿಳಾ ದಿನಾಚರಣೆಯನ್ನು ಒಂದು ದಿನಕ್ಕೆ ಸೀಮಿತಗೊಳಿಸುವುದು ಸರಿ­ಯಲ್ಲ. ದಿನ ನಿತ್ಯವೂ ಅವಳಿಗೆ ಗೌರವವನ್ನು ನೀಡುವ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸ­ಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.

ಕೆನರಾ ಬ್ಯಾಂಕ್ ಪ್ರಧಾನ ವ್ಯವ­ಸ್ಥಾಪಕಿ ಪಿ.ವಿ.ಭಾರತಿ ಮಾತನಾಡಿ, ‘ಇಂದು ಮಹಿಳೆಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸು­ತ್ತಿ­ದ್ದಾರೆ. ಬ್ಯಾಂಕಿಂಗ್‌, ಹಣಕಾಸು ಕ್ಷೇತ್ರ­ಗಳಲ್ಲಿ ದಿನದಿಂದ ದಿನಕ್ಕೆ ಪ್ರಗತಿ ಸಾಧಿ­ಸು­ತ್ತಿದ್ದಾರೆ. ಲೆಕ್ಕ ಪರಿಶೋಧಕರ ಹುದ್ದೆ­ಯಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ­ಯಿತ್ತು. ಆದರೆ, ಈಗ ಮಹಿಳೆಯರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 2013 ರಲ್ಲಿ ಮಹಿಳಾ ಲೆಕ್ಕ ಪರಿಶೋಧಕರ ಸಂಖ್ಯೆ ಶೇ 22 ರಷ್ಟಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.