
ಪ್ರಜಾವಾಣಿ ವಾರ್ತೆನೆಲಮಂಗಲ: ಕನ್ನಡದ ಹಿತಕ್ಕೆ ಧಕ್ಕೆಯಾದರೆ ಸಿಡಿದೇಳುವಷ್ಟು ಸ್ವಾಭಿಮಾನವನ್ನು ಕನ್ನಡಿಗರು ಬೆಳೆಸಿಕೊಳ್ಳಬೇಕು ತಾಲ್ಲೂಕು ಸಾಹಿತ್ಯ ಪರಿಷತ್ತಿನ ಸಮ್ಮೇಳನದ ಅಧ್ಯಕ್ಷ ನೆ.ವಿಶ್ವನಾಥ್ ಸಲಹೆ ನೀಡಿದರು.
ಬಸವಣ್ಣ ದೇವರ ಮಠದಲ್ಲಿ ಏರ್ಪಡಿಸಿದ್ದ 7ನೇಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಭಾಷಿಕರ ದುರಾಭಿಮಾನವನ್ನು ಸಹಿಸಿಕೊಳ್ಳುವ ಧೋರಣೆಯನ್ನು ಇನ್ನಾದರೂ ಬಿಡಬೇಕು ಎಂದು ಹೇಳಿದರು. ‘ನೆಲಮಲ್ಲಿಗೆ’ ಸ್ಮರಣ ಸಂಚಿಕೆಯನ್ನು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಬಿಡುಗಡೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.