ADVERTISEMENT

‘ಕ್ರೀಡಾಕೂಟದಿಂದ ಮಾನಸಿಕ ನೆಮ್ಮದಿ ಸಾಧ್ಯ’

​ಪ್ರಜಾವಾಣಿ ವಾರ್ತೆ
Published 8 ಜನವರಿ 2014, 20:28 IST
Last Updated 8 ಜನವರಿ 2014, 20:28 IST

ಯಲಹಂಕ: ‘ಸದಾ ಕುಟುಂಬ ನಿರ್ವಹಣೆಯ ಒತ್ತಡದಲ್ಲಿ ಸಿಲುಕಿರುವ ಮಹಿಳೆಯರು  ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ನೆಮ್ಮದಿ ಹೊಂದಲು ಸಾಧ್ಯ’ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಣಿಶ್ರೀ ವಿಶ್ವನಾಥ್‌ ತಿಳಿಸಿದರು.

ಶ್ರೀನಿವಾಸಪುರದ ಸಾಯಿಸಮೃದ್ಧಿ ಅಪಾರ್ಟ್‌ಮೆಂಟ್‌ ಆವರಣದಲ್ಲಿ ಆಯೋ­ಜಿಸಿದ್ದ ಯಲಹಂಕ ಮಹಿಳೆ ಯರ ಕ್ರೀಡಾಕೂಟದಲ್ಲಿ ವಿಜೇತರಾದ ವರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವನಜಾಕ್ಷಿ, ಕ್ಷೇತ್ರದ ಬಿಜೆಪಿ ಮಹಿಳಾಮೋರ್ಚಾ ಪ್ರಧಾನ ಕಾರ್ಯದರ್ಶಿ ವಸುಧಾ, ಮಾತೃ ಅಂಧರ ಶಿಕ್ಷಣಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ಮುಕ್ತಾ ಇದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.