ದೇವನಹಳ್ಳಿ: ಕೇಂದ್ರ ಸಚಿವ ವೀರಪ್ಪ ಮೊಯಿಲಿ ಎತ್ತಿನಹೊಳೆ ಪೈಪ್ಲೈನ್ ಯೋಜನೆಯ ಸೃಷ್ಟಿಕರ್ತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ ವ್ಯಂಗ್ಯವಾಡಿದರು.
ತಾಲ್ಲೂಕಿನ ಲಕ್ಷ್ಮಿಪುರದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೊಯಿಲಿ ಅವರು ಬಯಲು ಸೀಮೆಯ ಜನರ ಕಿವಿಗೆ ಹೂ ಇಡುವ ಕೆಲಸಮಾಡಿದ್ದಾರೆ. ಇದೆಲ್ಲಾ ಚುನಾವಣೆಯ ಗಿಮಿಕ್ ಎಂದು ಜರಿದರು.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮ ರೆಡ್ಡಿಯವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಸಿಪಿಎಂ ಘಟಕದ ಅಧ್ಯಕ್ಷ ಗೋಪಿನಾಥ್, ಪ್ರಾಂತ ರೈತ ಸಂಘದ ಅಧ್ಯಕ್ಷ ವೀರಣ್ಣ, ಉಪಾಧ್ಯಕ್ಷ ಮೋಹನ್ ಬಾಬು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.