ADVERTISEMENT

‘ರಾಸಾಯನಿಕ ವಿಪತ್ತು: ಸೂಕ್ತ ವ್ಯವಸ್ಥೆಯೇ ಇಲ್ಲ’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 19:39 IST
Last Updated 5 ಡಿಸೆಂಬರ್ 2013, 19:39 IST
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಬುಧವಾರ ನಗರದಲ್ಲಿ ಆಯೋಜಿಸಿದ್ದ ‘ರಾಸಾಯನಿಕ ದುರಂತ ತಡೆ ದಿನ’ ಕಾರ್ಯಾಗಾರದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ವಾಮನ ಆಚಾರ್ಯ ಮಾತನಾಡಿದರು. ಫ್ಯಾಕ್ಟರೀಸ್‌ ಅಂಡ್‌ ಬಾಯ್ಲರ್ಸ್‌ ವಿಭಾಗದ ಜಂಟಿ ನಿರ್ದೇಶಕ ವಿಜಯೇಂದ್ರ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಐಜಿಪಿ ಕೆ.ಎಲ್‌.ಸುಧೀರ್‌, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ವಿಜಯಕುಮಾರ್‌,ಕಾರ್ಮಿಕರ ಇಲಾಖೆಯ ಉಪ ಆಯುಕ್ತ ಎಸ್‌.ಬಿ.ರವಿಕುಮಾರ್‌ ಚಿತ್ರದಲ್ಲಿದ್ದಾರೆ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಬುಧವಾರ ನಗರದಲ್ಲಿ ಆಯೋಜಿಸಿದ್ದ ‘ರಾಸಾಯನಿಕ ದುರಂತ ತಡೆ ದಿನ’ ಕಾರ್ಯಾಗಾರದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ವಾಮನ ಆಚಾರ್ಯ ಮಾತನಾಡಿದರು. ಫ್ಯಾಕ್ಟರೀಸ್‌ ಅಂಡ್‌ ಬಾಯ್ಲರ್ಸ್‌ ವಿಭಾಗದ ಜಂಟಿ ನಿರ್ದೇಶಕ ವಿಜಯೇಂದ್ರ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಐಜಿಪಿ ಕೆ.ಎಲ್‌.ಸುಧೀರ್‌, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ವಿಜಯಕುಮಾರ್‌,ಕಾರ್ಮಿಕರ ಇಲಾಖೆಯ ಉಪ ಆಯುಕ್ತ ಎಸ್‌.ಬಿ.ರವಿಕುಮಾರ್‌ ಚಿತ್ರದಲ್ಲಿದ್ದಾರೆ   

ಬೆಂಗಳೂರು: ‘ರಾಸಾಯನಿಕ ವಿಪತ್ತು ಸಂಭವಿಸಿ­ದಾಗ ತುರ್ತು ಪರಿಹಾರ  ಕೈಗೊಳ್ಳುವ ಸೂಕ್ತ ವ್ಯವ­ಸ್ಥೆಯೇ ನಮ್ಮ ಬಳಿ ಇಲ್ಲ. ಅನಿಲಗಳ ರಾಸಾಯನಿಕ ಪ್ರಕ್ರಿಯೆ ಕುರಿತು ಯಾರೊಬ್ಬರಿಗೂ ಮಾಹಿತಿ ಇಲ್ಲ’ ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಐಜಿಪಿ ಕೆ.ಎಲ್‌.ಸುಧೀರ್‌ ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಬುಧವಾರ ನಗರದಲ್ಲಿ ಆಯೋಜಿಸಿದ್ದ ‘ರಾಸಾ­ಯನಿಕ ದುರಂತ ತಡೆ ದಿನ’ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಪರಸ್ಪರ ಇಲಾಖೆಗಳ ನಡುವೆ ಸಂವಹನ ಕೊರತೆ,   ಯಾವ ರಾಸಾಯನಿಕ ಅನಿಲ ಸ್ಫೋಟ ಸಂ­ಭ­ವಿ­ಸಿ­ದಾಗ ಏನು ಕ್ರಮ ಕೈಗೊಳ್ಳಬೇಕು ಎಂಬ ಮಾಹಿತಿ ಅಗ್ನಿ ಶಾಮಕ ದಳದ ಸಿಬ್ಬಂದಿಗೂ ಇಲ್ಲ’ ಎಂದರು.

‘ರಾಸಾಯನಿಕ ದುರಂತ ಸಂಭವಿಸಿದಾಗ, ರಾಸಾಯನಿಕದ ಮಾಹಿತಿ ಮತ್ತು ಪರಿಣಾಮದ ಕುರಿತು ತಿಳಿಯಲು ಕೊಚ್ಚಿನ್‌, ಅಹಮದಾಬಾದ್, ಚೆನ್ನೈ, ದೆಹಲಿಯಲ್ಲಿನ ವಿಷಕಾರಿ ರಾಸಾಯನಿಕ ಮಾಹಿತಿ ಕೇಂದ್ರಗಳಿಗೆ ಕಳುಹಿಸಬೇಕು. ಆಗ ತಕ್ಷಣದ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ವಿಷಾದಿಸಿದರು.

‘ಇತ್ತೀಚೆಗೆ ನಡೆದ ಕಟ್ಟಡದ ಕುಸಿತದ ವೇಳೆ ಕಟ್ಟಡ ಅವಶೇಷಗಳ ಅಡಿಯ ದೇಹಗಳನ್ನು ಹೊರತೆಗೆಯಲು ಜೆಸಿಬಿ ಯಂತ್ರದ ದೂರವಾಣಿ ಸಂಖ್ಯೆ ಬಿಬಿಎಂಪಿ ಅಧಿಕಾರಿಗಳ ಬಳಿ ಇರಲಿಲ್ಲ. ಹೀಗೆ ಇಲಾಖೆಗಳ ಸಮನ್ವಯ ಕೊರತೆ ಎದ್ದುಕಾಣುತ್ತದೆ’ ಎಂದರು.

‘ಕೈಗಾರಿಕೆಗಳು ಮತ್ತು ದಾಸ್ತಾನು ಮಳಿಗೆಗಳಲ್ಲಿ ಸಂಭವಿಸುವ ಆಕಸ್ಮಿಕ ರಾಸಾಯನಿಕ ಅನಿಲ ದುರಂ­ತ­­ಗಳಲ್ಲದೇ, ಭಯೋತ್ಪಾದಕರೂ ರಾಸಾ­ಯನಿಕ ದಾಳಿಗೆ ಮುಂದಾಗುತ್ತಿರುವುದು  ಆಘಾತ­ಕಾರಿ ಸಂಗ­ತಿ­ಯಾಗಿದೆ. ಭಯೋತ್ಪಾದಕರು ನಗರ­ದಲ್ಲಿ ರಾಸಾಯನಿಕ ದಾಳಿ ನಡೆಸಲು ಯೋಜನೆ ರೂಪಿಸುತ್ತಿರುವುದಾಗಿ 2010 ರಲ್ಲಿ ವರದಿ ಬಂದಿದ್ದು, ಗುಪ್ತಚರ ಇಲಾಖೆಯೂ ಧೃಢೀಕ­ರಿಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.