ADVERTISEMENT

‘ಸಂಕಲ್ಪ ಬಲದಿಂದ ಭವಿಷ್ಯದ ಚಿತ್ರ ಬದಲಾವಣೆ’

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2013, 19:41 IST
Last Updated 17 ಸೆಪ್ಟೆಂಬರ್ 2013, 19:41 IST

ಬೆಂಗಳೂರು: ‘ವಿದ್ಯಾರ್ಥಿಗಳು ಮನಸ್ಸು ಮಾಡಿದರೆ  ಭಾರತದ ಭವಿಷ್ಯದ ಚಿತ್ರವನ್ನು ಬದಲಾಯಿಸಲು ಸಾಧ್ಯ’ ಎಂದು ಕವಿ ಪ್ರೊ.ದೊಡ್ಡರಂಗೇಗೌಡ ಅಭಿಪ್ರಾಯಪಟ್ಟರು.

ನಗರದ ಶ್ರೀ ಕೃಷ್ಣ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಉಪನ್ಯಾಸ ನೀಡಿದ ಅವರು, ‘ವಿದ್ಯಾರ್ಥಿಗಳು ಸಂಕಲ್ಪ ಬಲದಿಂದ ಜ್ಞಾನದ ಸಂಸರ್ಗಕ್ಕೆ ಬಂದರೆ ಕೆಟ್ಟ ಪರಿಸ್ಥಿತಿಯನ್ನು ಸುಸ್ಥಿತಿಗೆ ತರಲು ಸಾಧ್ಯ’ ಎಂದರು.

ಎ.ಪಿ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ. ಆರ್.ರಂಗನಾಥ್  ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.