
ಪ್ರಜಾವಾಣಿ ವಾರ್ತೆಬೆಂಗಳೂರು: ‘ಬ್ಯಾಂಕ್ಗಳಲ್ಲಿ ಅನುತ್ಪಾದಕ ಆಸ್ತಿ (ಎನ್ಪಿಎ) ಆಗಿ ಮಾರ್ಪಟ್ಟಿರುವ ಬಾಕಿ ಸಾಲದ ವಸೂಲಿಗೆ ಸೂಕ್ತ ಕಾನೂನು ರೂಪಿಸುವ ಅಗತ್ಯವಿದೆ’ ಎಂದು ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬಿಸ್ವಾಸ್ ಹೇಳಿದರು.
ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ದೊಡ್ಡ ಉದ್ಯಮಿಗಳಿಂದ ₨1,40,000 ಕೋಟಿಯಷ್ಟು ವಸೂಲಾಗದ ಸಾಲ ಇದೆ. ಇದರಿಂದ ಬ್ಯಾಂಕ್ಗಳು ಸಂಕಷ್ಟಕ್ಕೆ ಸಿಲುಕಿವೆ. ಸಾಲ ವಸೂಲಿಗೆ ಸೂಕ್ತ ಕಾನೂನು ರೂಪಿಸಬೇಕಾದ ಅಗತ್ಯವಿದೆ ಎಂದರು.
ಮಾ. 8 ಮತ್ತು 9ರಂದು ಗಾಂಧಿನಗರದ ತೇರಾಪಂಥ್ ಭವನದಲ್ಲಿ 2ನೇ ಅಖಿಲ ಭಾರತ ಬ್ಯಾಂಕ್ ಮಹಿಳಾ ನೌಕರರ ಸಮಾವೇಶವವನ್ನು ಆಯೋಜಿಸಲಾಗಿದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.