ADVERTISEMENT

ಆದಿಚುಂಚನಗಿರಿ ಮಠದಿಂದ ₹50 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 21:44 IST
Last Updated 4 ಏಪ್ರಿಲ್ 2020, 21:44 IST

ಬೆಂಗಳೂರು: ‘ಕೊರೊನಾ ಸೋಂಕು ತಡೆಗಟ್ಟಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಹಾಸಂಸ್ಥಾನವು ₹ 50 ಲಕ್ಷ ದೇಣಿಗೆ ನೀಡಲಿದೆ’ ಎಂದು ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

‘ಮಠವು ಈ ಹಿಂದೆ ಕಾರ್ಗಿಲ್ ಯುದ್ಧ, ತಮಿಳುನಾಡಿನಲ್ಲಿ ಸಂಭವಿಸಿದ ಸುನಾಮಿ, ನೆರೆಹಾವಳಿ, ಬರಗಾಲ, ಪ್ರಕೃತಿ ವಿಕೋಪ, ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನತೆಗೆ ಅಗತ್ಯವಾದ ವಸ್ತುಗಳನ್ನು ನೀಡುವ ಮೂಲಕ ತನ್ನ ಸಮಾಜಸೇವೆಯನ್ನು ಮಾಡಿದೆ. ಜನರ ಒಳಿತಿಗಾಗಿಯೇ ಲಾಕ್‌ಡೌನ್ ಜಾರಿಗೆ ತರಲಾಗಿದ್ದು, ಇದನ್ನು ಎಲ್ಲರೂ ಪಾಲಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT