ಬೆಂಗಳೂರು: ರಾಜ್ಯದಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬಸ್ಸುಗಳು ಮತ್ತು ರೈಲುಗಳ ಮೂಲಕ ತಮ್ಮ ಊರುಗಳಿಗೆ ತೆರಳಿದ್ದಾರೆ. ಕಾರ್ಮಿಕರನ್ನು ಬಸ್ಸಿನಲ್ಲಿ ಕಳಿಸಿಕೊಡುವ ವ್ಯವಸ್ಥೆ ಗುರುವಾರ ಕೊನೆ ದಿನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಲ್ಲೇ ಉಳಿದಿರುವ ನಿರ್ಮಾಣ ಕಾಮಗಾರಿಗಳ ಕಾರ್ಮಿಕರಿಗೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡಲಾಗಿದೆ. ಇವರಿಗೆ ಕಳೆದ ಒಂದೂವರೆ ತಿಂಗಳಿಂದ ಸಂಬಳ ಮತ್ತು ಊಟದ ವ್ಯವಸ್ಥೆ ಮಾಡಿರುವುದಾಗಿ ಉದ್ಯಮಿಗಳು ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲ ರೀತಿಯ ಉದ್ಯಮಗಳು ಆರಂಭವಾಗಬೇಕು. ಕಾರ್ಮಿಕರು ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.