ಬೆಂಗಳೂರು: ಶಾಸಕ ಎಸ್.ಮುನಿರಾಜು ಅವರು ತಮ್ಮ 59ನೇ ಹುಟ್ಟುಹಬ್ಬದ ಪ್ರಯುಕ್ತ 10 ಅಂಗವಿಕಲರಿಗೆ ದ್ವಿಚಕ್ರ ವಾಹನವನ್ನು ಕೊಡುಗೆಯಾಗಿ ನೀಡಿದರು.
ಪೀಣ್ಯದಾಸರಹಳ್ಳಿ ಸಮೀಪದ ಶೆಟ್ಟಿಹಳ್ಳಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು, ಬಡ ವ್ಯಾಪಾರಸ್ಥರಿಗೆ ತಳ್ಳುಗಾಡಿಗಳನ್ನು ಹಾಗೂ ಸುಮಾರು 60 ಅಂಧರಿಗೆ ಬಟ್ಟೆಗಳನ್ನು ಉಚಿತವಾಗಿ ವಿತರಿಸಿದರು.
ಮುನಿರಾಜು ಅವರ ಭಾವಚಿತ್ರವಿರುವ 2018ನೇ ವರ್ಷದ ಕ್ಯಾಲೆಂಡರನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಬಿಡುಗಡೆ ಮಾಡಿದರು.
‘ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ. ಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು, ಸಚಿವರಾಗುವ ಭಾಗ್ಯ ನಿಮಗೆ ಲಭಿಸಲಿ’ ಎಂದು ಶುಭ ಹಾರೈಸಿದರು.
‘ಹಿರಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಕ್ಷೇತ್ರದ ಸಾವಿರಾರು ಜನರು ನನ್ನ ಹುಟ್ಟುಹಬ್ಬಕ್ಕೆ ಹಾರೈಸಿದ್ದಾರೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ನೀಡಿದ್ದಾರೆ’ ಎಂದು ಮುನಿರಾಜು ಧನ್ಯವಾದ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.