ಬೆಂಗಳೂರು: ಜಯನಗರದ ಬೈರಸಂದ್ರ ವಾರ್ಡ್ ವ್ಯಾಪ್ತಿಯಲ್ಲಿ ₹11 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ 37 ಕಾಮಗಾರಿಗಳಿಗೆ ಶಾಸಕ ಬಿ.ಎನ್.ವಿಜಯಕುಮಾರ್ ಸೋಮವಾರ ಚಾಲನೆ ನೀಡಿದರು.
‘ವಾರ್ಡ್ನಲ್ಲಿ ನಾಗರಿಕರ ಬದುಕನ್ನು ಉತ್ತಮಗೊಳಿಸಲು ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ಇದರಲ್ಲಿ ರಸ್ತೆಗಳ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದ ಅಭಿವೃದ್ಧಿ, ಉದ್ಯಾನಗಳ ಅಭಿವೃದ್ಧಿ, ಹಿರಿಯ ನಾಗರಿಕರಿಗಾಗಿ ಜಿಮ್ ನಿರ್ಮಾಣ ಕಾಮಗಾರಿಗಳು ಸೇರಿವೆ’ ಎಂದು ಪಾಲಿಕೆ ಸದಸ್ಯ ಎನ್.ನಾಗರಾಜು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.