ಬೆಂಗಳೂರು: ಲೋಕಸಭಾ ಚುನಾವಣೆಗೆ ಮತದಾನ ನಡೆಯುವ ದಿನದಂದು ರಾಜ್ಯ ಹೈಕೋರ್ಟ್ ಸೇರಿದಂತೆ ಎಲ್ಲ ಅಧೀನ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರಿನ ಪ್ರಧಾನ ಪೀಠಕ್ಕೆ ಇದೇ 18 ರಂದು ಹಾಗೂ ಧಾರವಾಡ ಮತ್ತು ಕುಲಬುರ್ಗಿ ಪೀಠಗಳಿಗೆ ಇದೇ 23ರಂದು ರಜೆ ಘೋಷಿಸಲಾಗಿದೆ.
ಏಪ್ರಿಲ್ 18ರಂದು ಧಾರವಾಡ ಮತ್ತು ಕಲಬುರ್ಗಿ ಹೈಕೋರ್ಟ್ ಪೀಠಗಳು ಕಾರ್ಯ ನಿರ್ವಹಿಸುವುದಿಲ್ಲ. ಬದಲಿಗೆ ಏಪ್ರಿಲ್ 27ರಂದು ಶನಿವಾರ ಕಾರ್ಯ ನಿರ್ವಹಿಸಲಿವೆ ಎಂದು ಹೈಕೋರ್ಟ್ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.