ADVERTISEMENT

ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರಿ ನೌಕರರಿಂದ ₹ 200 ಕೋಟಿ 

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 6:32 IST
Last Updated 10 ಆಗಸ್ಟ್ 2019, 6:32 IST
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಪ್ರವಾಹ ಪರಿಸ್ಥಿತಿ ಕುರಿತಂತೆ ಸಭೆ
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಪ್ರವಾಹ ಪರಿಸ್ಥಿತಿ ಕುರಿತಂತೆ ಸಭೆ   

ಬೆಂಗಳೂರು:ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರಿ ನೌಕರರು ಒಂದು ದಿನದ ಸಂಬಳ ನೀಡಲಿದ್ದು, ಸುಮಾರು 200 ಕೋಟಿ ರೂಪಾಯಿ ಸಂಗ್ರಹವಾಗಲಿದೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಶನಿವಾರ ಇಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಬಳ ರೂಪದಲ್ಲಿ 175 ಕೋಟಿಯಷ್ಟು ಸಂಗ್ರಹವಾಗುತ್ತದೆ. ಕೆಲವರು ವೈಯಕ್ತಿಕವಾಗಿ 50 ಸಾವಿರ, 1 ಲಕ್ಷ ರೂಪಾಯಿ ಕೊಡಲಿದ್ದಾರೆ. ಹೀಗಾಗಿ 200 ಕೋಟಿ ರೂಪಾಯಿಯನ್ನು ಸರ್ಕಾರಿ ನೌಕರರಿಂದ ಸಂಗ್ರಹಿಸಿ ಕೊಡಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT