ಬೆಂಗಳೂರು(ಪಿಟಿಐ): ಸಮೀಪದ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಸಾವಿನ ಸರಣಿ ಮುಂದುವರಿದಿದ್ದು ಗುರುವಾರ ರವಿ ಹೆಸರಿನ 22 ವರ್ಷದ ಗಂಡು ಸಿಂಹ ಸಾವನ್ನಪಿದೆ ಎಂದು ಮೂಲಗಳು ತಿಳಿಸಿವೆ.
ವಯಸ್ಸಾಗಿದ್ದ ಕಾರಣ ಅದು ಹಲವಾರು ದೈಹಿಕ ಸಮಸ್ಯೆಗಳಿಂದ ಬಳಲುತಿತ್ತು. ಹಲ್ಲುಗಳು ದುರ್ಬಲವಾಗಿದ್ದು , ಅದಕ್ಕೆ ಗಟ್ಟಿಯಾದ ಆಹಾರವನ್ನು ಸೇವಿಸಲು ಆಗುತಿರಲಿಲ್ಲ.
ಕಳೆದ ಹತ್ತು ವರ್ಷಗಳ ಹಿಂದೆ ಗುಲ್ಬರ್ಗದ ಗೀತಾ ಸರ್ಕಸ್ ನಲ್ಲಿದ್ದ ಈ ಸಿಂಹವನ್ನು ರಕ್ಷಿಸಿ ಇಲ್ಲಿಗೆ ಕರೆತರಲಾಗಿತ್ತು ಎಂದು ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.