ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯವು ತನ್ನ ಪ್ರಕಟಣೆಯ ಎಲ್ಲ ಪುಸ್ತಕಗಳಿಗೆ ಶೇ 25 ರಷ್ಟು ರಿಯಾಯಿತಿ ಘೋಷಿಸಿದೆ.
ಈ ಕೊಡುಗೆಯು ನವೆಂಬರ್ ತಿಂಗಳು ಪೂರ್ತಿ ಇರಲಿದೆ. ದೇಶದ ಮಹಾಪುರುಷರ ಬದುಕನ್ನು ಚಿತ್ರಿಸಿರುವ 610 ‘ಭಾರತೀ ಭಾರತ’ ಪುಸ್ತಕಗಳು ಸೇರಿದಂತೆ ವ್ಯಕ್ತಿತ್ವ ವಿಕಸನ, ಆರೋಗ್ಯ, ಜೀವನ ಚರಿತ್ರೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ 850 ಪುಸ್ತಕಗಳನ್ನು ಪ್ರಕಟಿಸಲಾಗಿದೆ. ಪುಸ್ತಕಗಳನ್ನು ಅಂಚೆ ವಿಳಾಸಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಪುಸ್ತಕ ಪ್ರೇಮಿಗಳು www.sahityabooks.com ಮೂಲಕ ಅಥವಾ ರಾಷ್ಟ್ರೋತ್ಥಾನ ಪುಸ್ತಕ ಮಳಿಗೆಯ ಮೂಲಕ ಖರೀದಿಸಬಹುದು ಎಂದು ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥ ಕೆ.ಎಸ್. ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕಕ್ಕೆ: 080 26612730 ಅಥವಾ 9880288909
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.